ನೇಪಥ್ಯಕ್ಕೆ ಸರಿದ ನವಯುಗದ ನೃತ್ಯ ಪ್ರವರ್ತಕಿ : ಡಾ.ಮಾಯಾರಾವ್

ಡಾ.ಮಾಯಾರಾವ್ - ದಕ್ಷಿಣಭಾರತದಲ್ಲೇ ಮೊದಲ ಬಾರಿಗೆ ಕಥಕ್‍ನೃತ್ಯ ಕಲಿತು, ಉತ್ತರಭಾರತದ ಹೆಸರಾಂತ ಗುರುಗಳ ಶಿಷ್ಯವೃತ್ತಿ ಮಾಡಿ ಭಾರತಾದ್ಯಂತ ಕಥಕ್ ನೃತ್ಯದ ಪರಿಮಳವನ್ನು ಹರಡಿಸಿ, ಜಾಗತಿಕವಾಗಿಯೂ ಭಾರತವನ್ನು ಪ್ರತಿನಿಧಿಸಿ ಭಾರತೀಯ ನೃತ್ಯದ ಪರಂಪರೆಗೆ ಹೊಸದಿಕ್ಕು ತೋರಿದವರು.  

ಕರಾವಳಿಯ ನೃತ್ಯಸರಸ್ವತಿ : ಶ್ರೀಮತಿ ಜಯಲಕ್ಷ್ಮಿ ಆಳ್ವ

ಮೊಗೆಮೊಗೆದು ಪ್ರೀತಿ ಸುರಿಸುವ ಆ ಹೊಳೆಯುವ ಕಣ್ಣ್ಣುಗಳಲ್ಲಿ ಮಾತೃತ್ವದ ಮಮತೆಯ ಸುಧೆ. ಹಾರ್ದ ಒಡನಾಟದಲ್ಲಿ ಹ್ಲಾದವೆನಿಸುವ ಕಲಾಕಂಪಿನ ತಂಪು. ಉಡುತ್ತಿದ್ದ ಬಿಳಿಸೀರೆಯ ಅಂಚು ಅಂಚಿನಲ್ಲೂ ಅನುಭವದ ಪಾಕಕ್ಕೆ ಹರಳುಗಟ್ಟಿದ ನಿರ್ಭಿಡೆಯ ನಿಲುವು. ಸದಭಿರುಚಿಯ ಕಲಾಪ್ರಯತ್ನಗಳಿಗೆ ಮುಕ್ತಮನಸ್ಸಿನ ಬಿಚ್ಚು ಮಾತು, ಅನಗತ್ಯ ವಾದಸರಣಿಗಳಿಂದ ದೂರವುಳಿದು ಕಲೆಯನ್ನೇ ನಿರಂತರ ಧ್ಯಾನಗೈಯುವ ಅಧ್ಯಯನನಿಷ್ಠೆ, ಕಲಾಕೈಂಕರ್ಯದಲ್ಲಿ ಅವಿರತ ತೊಡಗಿಸಿಕೊಂಡವರನ್ನು ಎಂದೆಂದಿಗೂ ಪ್ರೀತಿಸಿ ಆದರಿಸುವ ಪಕ್ವತೆ, ಸದಾ ಸ್ಮಿತಪೂರ್ವಾಭಿಭಾಷಿಣಿ- ಅಂತಹ ತಾಯಿ, ಕರಾವಳಿಯ ನಾಟ್ಯಕಲಾ ತಪಸ್ವಿನಿ ಜಯಲಕ್ಷ್ಮಿ ಆಳ್ವ ಇಂದು ನಮ್ಮೊಂದಿಗಿಲ್ಲ. ಆದರೆ ಕಲಾಕ್ಷೇತ್ರವನ್ನೂ ಒಳಗೊಂಡಂತೆ ಅವರು ನೂಪುರ ಭ್ರಮರಿಯೊಂದಿಗೆ ಇಟ್ಟುಕೊಂಡಿದ್ದ ಬೆಚ್ಚನೆಯ ಅನುಬಂಧ, ಯಾವುದೇ ಲೇಖನವನ್ನಾದರೂ ಆಸಕ್ತಿಯಿಂದ ಓದಿಸಿಕೊಳ್ಳುತ್ತಿದ್ದ ಮಮತೆಯನ್ನು ಎಂದೆಂದಿಗೂ ಮರೆಯುವಂತಿಲ್ಲ.

ಮೂಗೂರು ನೃತ್ಯಪರಂಪರೆಯ ಕೊನೆಯ ಕೊಂಡಿ : ಕೊಡವೂರು ಭಾಗವತ ಮಾಧವ ರಾವ್

ಕರ್ನಾಟಕದಲ್ಲೇ ಮೊದಲಬಾರಿಗೆ ನಾಡಿನ ನಟುವಾಂಗ ಪರಂಪರೆಯ ಕುರಿತು ಸಂಶೋಧನೆಯೊಂದನ್ನು ಕೈಗೊಳ್ಳಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಫೆಲೋಶಿಪ್ ಪ್ರದಾನ ಮಾಡಿದ್ದ ಸಮಯವದು. ಸಹಜವಾಗಿ ಕರ್ನಾಟಕದ ನೃತ್ಯಪರಂಪರೆಗಳನ್ನು ಬಾಳಿ ಬದುಕಿಸಿದ ಹಿರಿಯರ ಸಂಸರ್ಗ ಮಾಡಿದ ಕೊನೆಯ ಕೊಂಡಿಗಳನ್ನು ದರ್ಶಿಸುವ, ಸಂದರ್ಶಿಸುವ ಭಾಗ್ಯ ದೊರೆತಿತ್ತು. ಉಡುಪಿಯ ಕಲಾಸಕ್ತ ಬರೆಹಗಾರ, ಪತ್ರಿಕೆಯ ಸದಸ್ಯರೂ- ಪ್ರೋತ್ಸಾಹಕರೂ ಆದ ನನ್ನಣ್ಣ ಎನ್. ರಾಮ ಭಟ್ ಅವರನ್ನು ಸಂಪರ್ಕಿಸಿದ್ದೆ. ಅವರು ಕರ್ನಾಟಕ ಕಲಾತಿಲಕ, ನೃತ್ಯಶಿರೋಮಣಿ, ನಾಟ್ಯಶಾಂತಲಾ, ಮೈಸೂರು ರಾಜಮನೆತನದ ಮನ್ನಣೆ, ಉಡುಪಿ ವಿಶ್ವೇಶತೀರ್ಥ ಶ್ರೀಪಾದರ ಅನುಗ್ರಹ ಪ್ರಶಸ್ತಿ, ಅಚಲ ಪ್ರಶಸ್ತಿ ಸಮ್ಮಾನಿತರಾದ ಕೊಡವೂರು ಭಾಗವತ ಮಾಧವರಾವ್ ಅವರ ಬಳಿ ನನ್ನನು ಕೊಂಡೊಯ್ದು ನಟುವಾಂಗ ಪರಂಪರೆಯ ಆಳ ಅಗಲಗಳನ್ನು ಅರಿಯುವ ಹಂತಕ್ಕೆ ಒದಗಿ ಬಂದರು. ಜೊತೆಯಲ್ಲೊಂದು ವಿಡಿಯೋ ಕ್ಯಾಮೆರಾ ನೇತುಹಾಕಿಕೊಂಡು ಸಂಜೆಯೇರುವ ಮೊದಲೇ ಕೊಡವೂರಿಗೆ ಬಂದೆವು.

ಜಾಯಪಸೇನಾಪತಿಯ ನೃತ್ತರತ್ನಾವಳಿ- ಭಾಗ ೪

ಕರ್ನಾಟಕ ಕಾಣುತ್ತಿರುವ ಅತ್ಯುತ್ತಮ, ಹಿರಿಯ ತಲೆಮಾರಿನ ಸಂಶೋಧಕರಲ್ಲಿ ಡಾ. ಶೇಷ ಶಾಸ್ತ್ರಿ ಅವರದ್ದು ಮೇಲ್ಪಂಕ್ತಿಯಲ್ಲಿರುವ ಹೆಸರು. ಅವರ ಸಂಶೋಧನಾ ಕೃತಿ ‘ಕರ್ನಾಟಕದ ವೀರಗಲ್ಲುಗಳು’ ಶೋಧsಕ್ಷೇತ್ರಕ್ಕೆ ಮಹತ್ವದ ಸೇರ್ಪಡೆ. ಅದೂ ತನ್ನ ೩ನೇ ಆವೃತ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಕಾಣುತ್ತಿರುವುದು ಸಂಶೋಧನಾ ಕ್ಷೇತ್ರಕ್ಕೆ ಹೆಮ್ಮೆಯ ವಿಷಯ. ಸಂಶೋಧನೆಯೊಂದು ಮರುಪ್ರಕಟಣೆಗೊಳ್ಳುವಷ್ಟು ಅರ್ಹತೆ, ಜನಾದರ ಹೊಂದಿರುವುದಾದರೆ ಹೇಗೆ ಎನ್ನುವುದಕ್ಕೆ ಅವರ ಶೋಧಲೇಖನ ಮತ್ತು ಕೃತಿಗಳೇ ಸಾಕ್ಷಿ. ನೂಪುರ ಭ್ರಮರಿ ಆಯೋಜಿಸಿದ ಕರ್ನಾಟಕ ರಾಜ್ಯಮಟ್ಟದ ನೃತ್ಯಸಂಶೋಧನಾ ವಿಚಾರಸಂಕಿರಣದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಹಲವು ನಿರ್ದೇಶನಗಳನ್ನಿತ್ತವರು ಇವರೇ- ಡಾ. ಶೇಷಶಾಸ್ತ್ರಿ. ಅವರ ಅಧ್ಯಕ್ಷೀಯ ನುಡಿಗಳು ‘ನೂಪುರಾಗಮ’ದಲ್ಲಿ ಸವಿಸ್ತಾರವಾಗಿ ದಾಖಲಾಗಿವೆ ಕೂಡಾ. ನೂಪುರ ಭ್ರಮರಿಯೊಂದಿಗಿನ ನಂಟು, ಅದರ ಸದಸ್ಯರೊಂದಿಗಿನ ಒಡನಾಟ- ಪ್ರೀತಿಗೆ ನಾವು ಅವರಿಗೆ ಸದಾಕಾಲಕ್ಕೂ ಋಣಿ. ಇನ್ನೇನು ಸದ್ಯದಲ್ಲೇ ಅವರಿಗೆ ಅಭಿನಂದನಾ ಸಮಾರಂಭವೂ ಅಭಿಮಾನಿ ಇತಿಹಾಸಕಾರರಿಂದ ನೆರವೇರಲಿಕ್ಕಿದೆ.ತೆಲುಗು ಸಾಹಿತ್ಯ-ಸಂಶೋಧನೆ- ಶಾಸನಾಧ್ಯಯನದಲ್ಲಿಯೂ ಶಾಸ್ತ್ರಿಗಳ ಕೊಡುಗೆ ಅಪಾರವಿದೆ. ಮುಖ್ಯವಾಗಿ ಕನ್ನಡ-ತೆಲುಗಿನ ಪರಸ್ಪರ ಕೊಡುಕೊಳ್ಳುವಿಕೆ, ಸಹಸಂಬಂಧಕ್ಕೆ ಅವರ ನೋಟ ಬಹಳ ಅಪ್ಯಾಯಮಾನವಾದ ವಾತಾವರಣವನ್ನು ಸಾಹಿತ್ಯಲೋಕದಲ್ಲಿ ಕೊಟ್ಟಿದೆ. ನೃತ್ಯಸಂಶೋಧನಾ ವಿಚಾರಸಂಕಿರಣದ ಅಧ್ಯಕ್ಷತೆಯ ವೇಳೆ ವಿದ್ವಾಂಸರಾದ ಡಾ.ಪಿ.ಎಸ್.ಅಪ್ಪಾರಾಯರ ತೆಲುಗು ನಾಟ್ಯಶಾಸ್ತ್ರವನ್ನು ಕನ್ನಡಕ್ಕೆ ತರುವ ಯೋಜನೆಯನ್ನು ಹಾಕಿಕೊಂಡಿದ್ದರು. ಕಾರಣಾಂತರಗಳಿಂದ ಅದು ಲಂಬಿಸಿದೆ. ಆದರೇನಾಯಿತು, ಇದೀಗ ಅದರ ಕೊರತೆಯನ್ನು ತುಂಬುವಂತೆ ಜಾಯಪಸೇನಾಪತಿಯ ಅನರ್ಘ್ಯ ನೃತ್ಯಲಕ್ಷಣರತ್ನವನ್ನು ಕನ್ನಡಕ್ಕೆ ತರಲು ಅವರೇ ಸ್ವಯಂಪ್ರೇರಿತರಾಗಿ ಬಂದಿದ್ದಾರೆ. ಇದು ನಮ್ಮ ಭಾಗ್ಯವಲ್ಲದೇ ಮತ್ತೇನು?ಈ ಯೋಜನೆ ಕೈಗೂಡುವಲ್ಲಿ ಸೋಶಿಯಲ್ ಮೀಡಿಯಾದ ನೆರವಿದೆ. ನೂಪುರ ಭ್ರಮರಿಯ ಬಳಗದ ವಾಟ್ಸಾಪ್ ಗ್ರೂಪ್ ‘ಕಲಾಕೀಲಕ’ದ ಸದಸ್ಯರೂ ಆಗಿರುವ ಡಾ ಶೇಷ ಶಾಸ್ತ್ರಿ ಅವರು, ಒಮ್ಮೆ ಬಳಗದಲ್ಲಿ ಚರ್ಚೆಗೆ ಬಂದ ನೃತ್ತ ರತ್ನಾವಳಿಯ ವಿಚಾರವನ್ನು ವಿಸ್ತರಿಸಲು ತಮಗೆ ತಾವೇ ಬದ್ಧವಾದುದ್ದರ ಫಲವೇ ಈ ಅಂಕಣ. ತೆಲುಗಿನಲ್ಲಿ ರಾಳ್ಲಪಲ್ಲಿ ಅನಂತಕೃಷ್ಣ ಶರ್ಮರು ಸಂಪಾದಿಸಿ ಜಾಯಪಸೇನಾಪತಿಯ ನೃತ್ತರತ್ನಾವಳಿಯನ್ನು ಯಥಾವತ್ತಾಗಿ ಕನ್ನಡಕ್ಕೆ ತರುವ ಮಹತ್ಕಾರ್ಯವಿದು. ಇದರಿಂದ ಪ್ರಕೃತ ಭವಿಷ್ಯದಲ್ಲಿ ಹಲವಾರು ನೃತ್ಯಾಭ್ಯಾಸಿಗಳಿಗೆ, ಸಂಶೋಧನಾರ್ಥಿಗಳಿಗೆ ಬಹುಮುಖದ ಉಪಯೋಗ ಖಂಡಿತಾ ದೊರೆಯಲಿದೆ.‘ಕನ್ನಡಕ್ಕೆ ಭಾಷಾನುವಾದ ಮಾಡುವುದಷ್ಟೇ ನನ್ನ ಕೆಲಸ, ಅದರ ಸಂಪೂರ್ಣ ಕ್ರೆಡಿಟ್ ರಾಳ್ಲಪಲ್ಲಿಯವರಿಗೇ ಸಲ್ಲಬೇಕಾದದ್ದು ’ ಎಂಬುದನ್ನು ಪದೇ ಪದೇ ನೆನಪಿಸುತ್ತಲೇ ಇರುವ ಶೇಷ ಶಾಸ್ತ್ರಿ ಅವರದ್ದು ‘ವಿದ್ಯೆಗೆ ವಿನಯವೇ ಭೂಷಣ’ ಎಂಬ ಗುಣಶ್ರೀ. ಅಲ್ಲಲ್ಲಿ ಘಟಿಸಬಹುದಾದ ಭಾಷಾಂತರ ಲೋಪವೋ ಅಥವೋ ಕೈಬರೆವಣಿಗೆಯಲ್ಲಾಗಬಹುದಾದ ದೋಷಗಳನ್ನು ಸಾವರಿಸುವ ಸ್ವಾತಂತ್ರ್ಯವನ್ನೂ ಬಹುಪ್ರೀತಿಯಿಂದ ಕೊಟ್ಟಿದ್ದು; ಆ ಫಲವಾಗಿ ತಿದ್ದುಪಡಿಗಳನ್ನು ಮಾಡಬಹುದಾದ, ಟಿಪ್ಪಣಿಗಳನ್ನೋ, ಸುಧಾರಿತ ನೃತ್ಯಭಾಷೆಯನ್ನೋ ಸೇರಿಸಬಹುದಾದ ಅವಕಾಶವೂ ಇಲ್ಲಿ ದೊರೆತಿದೆ. ಆ ಮಟ್ಟಿಗಿನ ವಿಶ್ವಾಸವನ್ನು ಹೊಂದಿದ್ದೇವೆಂಬುದು ನಮ್ಮ ಭಾಗ್ಯವೇ ಸರಿ. ಈ ಕಾರ್ಯಕ್ಕೆ ಡಾ. ಶೇಷ ಶಾಸ್ತ್ರಿ ಮತ್ತು ನೂಪುರ ಭ್ರಮರಿಯ ಸಮಾನಶೀಲರು ಜೊತೆಗೂಡಲಿದ್ದಾರೆ. ಅವರಿಗೂ ಕೃತಜ್ಞತೆಗಳು.ಅಂಕಣದ ಮೊದಲನೇಯ ಭಾಗದಲ್ಲಿ ರಾಳ್ಲಪಲ್ಲಿ ಶರ್ಮರು ಬರೆದ ಉಪೋದ್ಘಾತ ಮತ್ತು ಅದನ್ನನುಸರಿಸಿದ ನೃತ್ತರತ್ನಾವಳಿಯ ನಾಂದಿಶ್ಲೋಕಗಳು ಇವೆ. ಅಕ್ಷರಭ್ರಮರಿಯ ಈ ನುಡಿಜಾತ್ರೆ ಇನ್ನೊಂದಷ್ಟು ಸಂಚಿಕೆಗಳಲ್ಲಿ ನೃತ್ತರತ್ನಾವಳಿಗೆ ಮೀಸಲು. - ಸಂಪಾದಕಿ

ಜಾಯಪಸೇನಾಪತಿಯ ನೃತ್ತರತ್ನಾವಳಿ- ಭಾಗ ೩

ಕರ್ನಾಟಕ ಕಾಣುತ್ತಿರುವ ಅತ್ಯುತ್ತಮ, ಹಿರಿಯ ತಲೆಮಾರಿನ ಸಂಶೋಧಕರಲ್ಲಿ ಡಾ. ಶೇಷ ಶಾಸ್ತ್ರಿ ಅವರದ್ದು ಮೇಲ್ಪಂಕ್ತಿಯಲ್ಲಿರುವ ಹೆಸರು. ಅವರ ಸಂಶೋಧನಾ ಕೃತಿ ‘ಕರ್ನಾಟಕದ ವೀರಗಲ್ಲುಗಳು’ ಶೋಧsಕ್ಷೇತ್ರಕ್ಕೆ ಮಹತ್ವದ ಸೇರ್ಪಡೆ. ಅದೂ ತನ್ನ ೩ನೇ ಆವೃತ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಕಾಣುತ್ತಿರುವುದು ಸಂಶೋಧನಾ ಕ್ಷೇತ್ರಕ್ಕೆ ಹೆಮ್ಮೆಯ ವಿಷಯ. ಸಂಶೋಧನೆಯೊಂದು ಮರುಪ್ರಕಟಣೆಗೊಳ್ಳುವಷ್ಟು ಅರ್ಹತೆ, ಜನಾದರ ಹೊಂದಿರುವುದಾದರೆ ಹೇಗೆ ಎನ್ನುವುದಕ್ಕೆ ಅವರ ಶೋಧಲೇಖನ ಮತ್ತು ಕೃತಿಗಳೇ ಸಾಕ್ಷಿ. ನೂಪುರ ಭ್ರಮರಿ ಆಯೋಜಿಸಿದ ಕರ್ನಾಟಕ ರಾಜ್ಯಮಟ್ಟದ ನೃತ್ಯಸಂಶೋಧನಾ ವಿಚಾರಸಂಕಿರಣದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಹಲವು ನಿರ್ದೇಶನಗಳನ್ನಿತ್ತವರು ಇವರೇ- ಡಾ. ಶೇಷಶಾಸ್ತ್ರಿ. ಅವರ ಅಧ್ಯಕ್ಷೀಯ ನುಡಿಗಳು ‘ನೂಪುರಾಗಮ’ದಲ್ಲಿ ಸವಿಸ್ತಾರವಾಗಿ ದಾಖಲಾಗಿವೆ ಕೂಡಾ. ನೂಪುರ ಭ್ರಮರಿಯೊಂದಿಗಿನ ನಂಟು, ಅದರ ಸದಸ್ಯರೊಂದಿಗಿನ ಒಡನಾಟ- ಪ್ರೀತಿಗೆ ನಾವು ಅವರಿಗೆ ಸದಾಕಾಲಕ್ಕೂ ಋಣಿ. ಇನ್ನೇನು ಸದ್ಯದಲ್ಲೇ ಅವರಿಗೆ ಅಭಿನಂದನಾ ಸಮಾರಂಭವೂ ಅಭಿಮಾನಿ ಇತಿಹಾಸಕಾರರಿಂದ ನೆರವೇರಲಿಕ್ಕಿದೆ.ತೆಲುಗು ಸಾಹಿತ್ಯ-ಸಂಶೋಧನೆ- ಶಾಸನಾಧ್ಯಯನದಲ್ಲಿಯೂ ಶಾಸ್ತ್ರಿಗಳ ಕೊಡುಗೆ ಅಪಾರವಿದೆ. ಮುಖ್ಯವಾಗಿ ಕನ್ನಡ-ತೆಲುಗಿನ ಪರಸ್ಪರ ಕೊಡುಕೊಳ್ಳುವಿಕೆ, ಸಹಸಂಬಂಧಕ್ಕೆ ಅವರ ನೋಟ ಬಹಳ ಅಪ್ಯಾಯಮಾನವಾದ ವಾತಾವರಣವನ್ನು ಸಾಹಿತ್ಯಲೋಕದಲ್ಲಿ ಕೊಟ್ಟಿದೆ. ನೃತ್ಯಸಂಶೋಧನಾ ವಿಚಾರಸಂಕಿರಣದ ಅಧ್ಯಕ್ಷತೆಯ ವೇಳೆ ವಿದ್ವಾಂಸರಾದ ಡಾ.ಪಿ.ಎಸ್.ಅಪ್ಪಾರಾಯರ ತೆಲುಗು ನಾಟ್ಯಶಾಸ್ತ್ರವನ್ನು ಕನ್ನಡಕ್ಕೆ ತರುವ ಯೋಜನೆಯನ್ನು ಹಾಕಿಕೊಂಡಿದ್ದರು. ಕಾರಣಾಂತರಗಳಿಂದ ಅದು ಲಂಬಿಸಿದೆ. ಆದರೇನಾಯಿತು, ಇದೀಗ ಅದರ ಕೊರತೆಯನ್ನು ತುಂಬುವಂತೆ ಜಾಯಪಸೇನಾಪತಿಯ ಅನರ್ಘ್ಯ ನೃತ್ಯಲಕ್ಷಣರತ್ನವನ್ನು ಕನ್ನಡಕ್ಕೆ ತರಲು ಅವರೇ ಸ್ವಯಂಪ್ರೇರಿತರಾಗಿ ಬಂದಿದ್ದಾರೆ. ಇದು ನಮ್ಮ ಭಾಗ್ಯವಲ್ಲದೇ ಮತ್ತೇನು?ಈ ಯೋಜನೆ ಕೈಗೂಡುವಲ್ಲಿ ಸೋಶಿಯಲ್ ಮೀಡಿಯಾದ ನೆರವಿದೆ. ನೂಪುರ ಭ್ರಮರಿಯ ಬಳಗದ ವಾಟ್ಸಾಪ್ ಗ್ರೂಪ್ ‘ಕಲಾಕೀಲಕ’ದ ಸದಸ್ಯರೂ ಆಗಿರುವ ಡಾ ಶೇಷ ಶಾಸ್ತ್ರಿ ಅವರು, ಒಮ್ಮೆ ಬಳಗದಲ್ಲಿ ಚರ್ಚೆಗೆ ಬಂದ ನೃತ್ತ ರತ್ನಾವಳಿಯ ವಿಚಾರವನ್ನು ವಿಸ್ತರಿಸಲು ತಮಗೆ ತಾವೇ ಬದ್ಧವಾದುದ್ದರ ಫಲವೇ ಈ ಅಂಕಣ. ತೆಲುಗಿನಲ್ಲಿ ರಾಳ್ಲಪಲ್ಲಿ ಅನಂತಕೃಷ್ಣ ಶರ್ಮರು ಸಂಪಾದಿಸಿ ಜಾಯಪಸೇನಾಪತಿಯ ನೃತ್ತರತ್ನಾವಳಿಯನ್ನು ಯಥಾವತ್ತಾಗಿ ಕನ್ನಡಕ್ಕೆ ತರುವ ಮಹತ್ಕಾರ್ಯವಿದು. ಇದರಿಂದ ಪ್ರಕೃತ ಭವಿಷ್ಯದಲ್ಲಿ ಹಲವಾರು ನೃತ್ಯಾಭ್ಯಾಸಿಗಳಿಗೆ, ಸಂಶೋಧನಾರ್ಥಿಗಳಿಗೆ ಬಹುಮುಖದ ಉಪಯೋಗ ಖಂಡಿತಾ ದೊರೆಯಲಿದೆ.‘ಕನ್ನಡಕ್ಕೆ ಭಾಷಾನುವಾದ ಮಾಡುವುದಷ್ಟೇ ನನ್ನ ಕೆಲಸ, ಅದರ ಸಂಪೂರ್ಣ ಕ್ರೆಡಿಟ್ ರಾಳ್ಲಪಲ್ಲಿಯವರಿಗೇ ಸಲ್ಲಬೇಕಾದದ್ದು ’ ಎಂಬುದನ್ನು ಪದೇ ಪದೇ ನೆನಪಿಸುತ್ತಲೇ ಇರುವ ಶೇಷ ಶಾಸ್ತ್ರಿ ಅವರದ್ದು ‘ವಿದ್ಯೆಗೆ ವಿನಯವೇ ಭೂಷಣ’ ಎಂಬ ಗುಣಶ್ರೀ. ಅಲ್ಲಲ್ಲಿ ಘಟಿಸಬಹುದಾದ ಭಾಷಾಂತರ ಲೋಪವೋ ಅಥವೋ ಕೈಬರೆವಣಿಗೆಯಲ್ಲಾಗಬಹುದಾದ ದೋಷಗಳನ್ನು ಸಾವರಿಸುವ ಸ್ವಾತಂತ್ರ್ಯವನ್ನೂ ಬಹುಪ್ರೀತಿಯಿಂದ ಕೊಟ್ಟಿದ್ದು; ಆ ಫಲವಾಗಿ ತಿದ್ದುಪಡಿಗಳನ್ನು ಮಾಡಬಹುದಾದ, ಟಿಪ್ಪಣಿಗಳನ್ನೋ, ಸುಧಾರಿತ ನೃತ್ಯಭಾಷೆಯನ್ನೋ ಸೇರಿಸಬಹುದಾದ ಅವಕಾಶವೂ ಇಲ್ಲಿ ದೊರೆತಿದೆ. ಆ ಮಟ್ಟಿಗಿನ ವಿಶ್ವಾಸವನ್ನು ಹೊಂದಿದ್ದೇವೆಂಬುದು ನಮ್ಮ ಭಾಗ್ಯವೇ ಸರಿ. ಈ ಕಾರ್ಯಕ್ಕೆ ಡಾ. ಶೇಷ ಶಾಸ್ತ್ರಿ ಮತ್ತು ನೂಪುರ ಭ್ರಮರಿಯ ಸಮಾನಶೀಲರು ಜೊತೆಗೂಡಲಿದ್ದಾರೆ. ಅವರಿಗೂ ಕೃತಜ್ಞತೆಗಳು.ಅಂಕಣದ ಮೊದಲನೇಯ ಭಾಗದಲ್ಲಿ ರಾಳ್ಲಪಲ್ಲಿ ಶರ್ಮರು ಬರೆದ ಉಪೋದ್ಘಾತ ಮತ್ತು ಅದನ್ನನುಸರಿಸಿದ ನೃತ್ತರತ್ನಾವಳಿಯ ನಾಂದಿಶ್ಲೋಕಗಳು ಇವೆ. ಅಕ್ಷರಭ್ರಮರಿಯ ಈ ನುಡಿಜಾತ್ರೆ ಇನ್ನೊಂದಷ್ಟು ಸಂಚಿಕೆಗಳಲ್ಲಿ ನೃತ್ತರತ್ನಾವಳಿಗೆ ಮೀಸಲು. - ಸಂಪಾದಕಿ